ಪ್ರಜಾಸ್ತ್ರ ಸುದ್ದಿ
ಕೃಷ್ಣಜಿಲ್ಲೆ: ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಜನ ಕಾರ್ಮಿಕರು ಸಾವನ್ನಪ್ಪಿದ ಘಟನೆ ಆಂಧ್ರದ ಕೃಷ್ಣಜಿಲ್ಲೆಯ ಗೋಪಲ್ಲಿ ಅನ್ನೋ ಗ್ರಾಮದ ಬಳಿ ನಡೆದಿದೆ. ಭಾನುವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.
ಇನ್ನು ಅಪಘಾತದಲ್ಲಿ 6 ಜನರು ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.