ಪ್ರಜಾಸ್ತ್ರ ಸುದ್ದಿ
ಸಿಂದಗಿ: ಲಾರಿ ಹಾಗೂ ಬೈಕ್ ನಡುವೆ ಸಿಂದಗಿ ಆಲಮೇಲ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇದರಿಂದಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಚಂದ್ರು ಅಗಸರ ಮೃತ ಯುವಕ ಎಂದು ತಿಳಿದು ಬಂದಿದೆ. ಆಲಮೇಲದಿಂದ ಸಿಂದಗಿಗೆ ಬರುವ ವೇಳೆ ಈ ಅನಾಹುತ ಸಂಭವಿಸಿದೆ.
ಮೃತ ಯುವಕ ಮೂಲತಃ ಸಿಂದಗಿ ತಾಲೂಕಿನ ಯರಗಲ್ಲ.ಬಿ.ಕೆ ಗ್ರಾಮದವನ್ನಾಗಿದ್ದಾನೆ. ಸಿಂದಗಿ ಪಟ್ಟಣದ ರಕ್ತ ತಪಾಸಣೆ ಲ್ಯಾಬ್ ನಲ್ಲಿ ಕೆಲಸ ಮಾಡುತ್ತಿದ್ದ. ಹೀಗಾಗಿ ಬೈಕ್ ನಲ್ಲಿ ಲಾಬ್ ಗೆ ಸಂಬಂಧಿಸಿದ ವಸ್ತುಗಳನ್ನು ತರುತ್ತಿದ್ದ ವೇಳೆ ಈ ಅನಾಹುತ ನಡೆದಿದೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.