ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಧ್ವನಿವರ್ಧಕ ಸಂಬಂಧ ಸರ್ಕಾರ ನೀಡಿರುವ ಆದೇಶ ಪಾಲಿಸದಿದ್ದರೆ ಗುಂಡು ಹೊಡೆಯುವೆ ಅನ್ನೋ ವಿವಾದಾತ್ಮಕ ಹೇಳಿಕೆಯನ್ನು ಶ್ರೀರಾಮ್ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸುತ್ತೇನೆ. ಪಾಲಿಸದಿದ್ದರೆ ಗುಂಡು ಹೊಡೆಯುತ್ತೇನೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ 15 ದಿನಗಳ ಅವಕಾಶ ನೀಡಿದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅಧಿಕಾರದಿಂದ ಕೆಳಗೆ ಇಳಿದು ನನಗೆ ಅಧಿಕಾರ ನೀಡಲಿ ಎಂದಿದ್ದಾರೆ.