ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪ್ರೇಮ ವೈಫಲ್ಯ ಕಾರಣಕ್ಕೆ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನವೀನ್(27) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕೊಳ್ಳೇಗಾಲ ಮೂಲದ ನವೀನ್ ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ವಾಸವಾಗಿದ್ದ. ಕೆಲ ವರ್ಷಗಳಿಂದ ಬಾಳೆ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ. ಇದೀಗ ಪ್ರೇಮ ವೈಫಲ್ಯಕ್ಕೆ ನೇಣಿಗೆ ಶರಣಾಗಿದ್ದಾನೆ.