ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಮತಾಂತರ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ನಿಷೇಧ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ನಾಳೆ ಸದನದಲ್ಲಿ ಕಾಯ್ದೆ ನಿಷೇಧದ ಕುರಿತು ಮಂಡಿಸಲಾಗುವುದು ಎಂದು ತಿಳಿದು ಬಂದಿದೆ.
ಸರ್ಕಾರದ ನಿರ್ಧಾರವನ್ನು ಖಂಡಿಸಿ ಭಾರತೀಯ ಕ್ರೈಸ್ತ್ ಒಕ್ಕೂಟ ಪ್ರತಿಭಟನೆ ನಡೆಸಿಕೊಂಡು ಬರುತ್ತಿದೆ. ಅಲ್ದೇ, ಮತಾಂತರ ಕಾಯ್ದೆ ನಿಷೇಧಕ್ಕೆ ಕಾಂಗ್ರೆಸ್ ಸಹ ವಿರೋಧ ವ್ಯಕ್ತಪಡಿಸುತ್ತಿದೆ. ಈ ಸಮುದಾಯದವರಿಗೆ ತೊಂದರೆಯಾಗಲು ಅವಕಾಶ ನೀಡುವುದಿಲ್ಲವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.