ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಅಶ್ಲೀಲ ಫೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ ಎಂದು ಹೇಳಿ ಪ್ರಿಯಕರನನ್ನು ಹತ್ಯೆ ಮಾಡಿದ ಘಟನೆ ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ನಡೆದಿದೆ.
ಡಾ.ವಿಕಾಸ್ ಕೊಲೆಯಾದ ದುರ್ದೈವಿ. ಪ್ರತಿಭಾ, ಸುಶೀಲ್, ಗೌತಮ್, ಸೂರ್ಯ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಪ್ರತಿಭಾ ಹಾಗೂ ವಿಕಾಸ್ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಎರಡು ಕಡೆ ಕುಟುಂಬಸ್ಥರು ಒಪ್ಪಿಕೊಂಡು ಮದುವೆಗೆ ಸಮ್ಮತಿ ನೀಡಿದ್ದರು. ಹೀಗಿರುವಾಗ ವಿಕಾಸ್, ಪ್ರತಿಭಾಳ ಅಶ್ಲೀಲ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದ ಎಂದು ಕೊಲೆ ಮಾಡಲಾಗಿದೆ.