ಸಿಂದಗಿ ತಾಲೂಕಿನಲ್ಲಿ ಪ್ರೇಮಿಗಳು ಆತ್ಮಹತ್ಯೆ

681

ಪ್ರಜಾಸ್ತ್ರ ಸುದ್ದಿ

ಸಿಂದಗಿ/ದೇವರಹಿಪ್ಪರಗಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ವ್ಯಾಪ್ತಿಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಿಂದಗಿ ತಾಲೂಕು, ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬನಹಟ್ಟಿ ಪಿ.ಎ ಗ್ರಾಮದ ಸುರೇಶ ಚೌಧರಿ ಎಂಬುವರ ಹೊಲದ ಬಾವಿಯಲ್ಲಿ ಶವ ಪತ್ತೆಯಾಗಿವೆ.

ಭಾನುವಾರ ನಸುಕಿನ ಜಾವ 4 ಗಂಟೆಯಿಂದ ಬೆಳಗ್ಗೆ 10 ಗಂಟೆಯ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. 20 ವರ್ಷದ ಶಿವಕುಮಾರ ಚೌಧರಿ ಹಾಗೂ 16 ವರ್ಷದ ಅನ್ಯಕೋಮಿನ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.

ಇವರಿಬ್ಬರು ಪ್ರೀತಿ ಮಾಡ್ತಿದ್ದು, ಈ ವಿಚಾರ ಮನೆಯಲ್ಲಿ ಗೊತ್ತಾಗಿದೆಯಂತೆ. ಎಲ್ಲಿ ಮನೆಯವರಿಂದ ತೊಂದರೆಯಾಗುತ್ತೆ ಅನ್ನೋ ಕಾರಣಕ್ಕೆ, ಶಿವಕುಮಾರ ಹಾಗೂ ಅಪ್ರಾಪ್ತೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!