ರಾಜ್ಯದಲ್ಲಿ ವಸೂಲಿ ಗ್ಯಾಂಗ್ ಸರ್ಕಾರ: ಪ್ರಧಾನಿ ಮೋದಿ

65

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ: ಕರ್ನಾಟಕದಲ್ಲಿ ವಸೂಲಿ ಗ್ಯಾಂಗ್ ಸರ್ಕಾರ ನಡೆಸುತ್ತಿದೆ. ಖಜಾನೆಗೆ ಹಣ ಬರುತ್ತಿದ್ದಂತೆ ಲೂಟಿ ಮಾಡುತ್ತೆ. ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಬಾಗಲಕೋಟೆ, ವಿಜಯಪುರ ಅಭ್ಯರ್ಥಿಗಳ ಪರವಾಗಿ ನಡೆದ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಲೂಟಿಯಿಂದಾಗಿ ಮುಂದಿನ ದಿನಗಳಲ್ಲಿ ನೌಕರರಿಗೆ ಸಂಬಳ ಕೂಡಲು ಆಗಲ್ಲ. ನಿಮ್ಮ ಮಕ್ಕಳು ಉಪವಾಸ ಸಾಯಬೇಕಾದ ಪರಿಸ್ಥಿತಿ ಬರುತ್ತೆ. ರಾಜ್ಯ ಲೂಟಿ ಮಾಡುವವರಿಗೆ ಮೇ 7ರಂದು ಶಿಕ್ಷೆಯಾಗಬೇಕಲ್ಲವೇ ಎಂದು ಕೇಳಿದರು.

ಭಾರತವನ್ನು ವಿಶ್ವದ ಮೂರು ಅಗ್ರ ಆರ್ಥಿಕತೆಯಲ್ಲಿ ಒಂದಾಗಿಸುವ ಗುರಿ ಇದೆ. ಉತ್ಪಾದನಾ, ಕೌಶಲ್ಯ ಹಬ್ ಮಾಡಲು ಬಯಸುತ್ತೇವೆ. ಇದಕ್ಕೆ ದೂರದೃಷ್ಟಿ ಬೇಕು. 60 ವರ್ಷ ಆಡಳಿತದಲ್ಲಿದ್ದವರು ಒಂದೇ ಬಾರಿಗೆ ಬಡತನ ಹೋಗಲಾಡಿಸುತ್ತೇವೆ ಅಂತಾರೆ. ಮೂಲಭೂತವಾದಿ ಮನಸ್ಥಿತಿಯುಳ್ಳವರನ್ನು ಕಾಂಗ್ರೆಸ್ ರಕ್ಷಿಸುತ್ತಿದೆ ಎಂದು ಆರೋಪಿಸಿದರು.




Leave a Reply

Your email address will not be published. Required fields are marked *

error: Content is protected !!