ಪ್ರಜಾಸ್ತ್ರ ಸುದ್ದಿ
ಕೋಲಾರ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ-2 ಪ್ರಚಾರ ಯಾತ್ರೆಗೆ ಇಂದು ಚಾಲನೆ ಸಿಕ್ಕಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನದಲ್ಲಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಚಾರಕ್ಕೆ ಚಾಲನೆ ನೀಡಿದರು.
ಇನ್ನು ಸಿಎಂ ಆರ್.ಎಲ್ ಜಾಲಪ್ಪ ಆಸ್ಪತ್ರೆಯ ಹೆಲಿಪ್ಯಾಡ್ ಗೆ ಬಂದು ಇಳಿಯುತ್ತಿದ್ದಂತೆ ಚುನಾವಣೆ ಅಧಿಕಾರಿಗಳು ತಪಾಸಣೆ ನಡೆಸಿದರು. ಈ ಮೂಲಕ ಚುನಾವಣೆ ಅಕ್ರಮ ತಡೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಎಲ್ಲರನ್ನು ತಪಾಸಣೆ ನಡೆಸುತ್ತಿದ್ದಾರೆ. ಹೀಗಾಗಿ ಸಿಎಂ, ಡಿಸಿಎಂಗೆ ನೀತಿ ಸಂಹಿತೆ ಬಿಸಿ ತಟ್ಟಿತು.
ಸಿಎಂ, ಡಿಸಿಎಂ ಕೋಲಾರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ 2ನೇ ಹಂತದ ಪ್ರಚಾರವನ್ನು ಅದ್ಧೂರಿಯಾಗಿ ನಡೆಸಲಿದ್ದಾರೆ.