Search

ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

64

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಲೋಕಸಭಾ ಚುನಾವಣೆ ಕರ್ನಾಟಕದ ಮೊದಲ ಹಂತದ ಮತದಾನ ಶುಕ್ರವಾರ ಮುಗಿದಿದೆ. ಆದರೆ, ಈ ವೇಳೆ ಜಿಲ್ಲೆಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ ಇವಿಎಂ ಹಾನಿಗೊಳಿಸಿ ಗಲಾಟೆ ಮಾಡಲಾಗಿತ್ತು. ಈ ಸಂಬಂಧ ಏಪ್ರಿಲ್ 29ರಂದು ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

ಈ ಮತಗಟ್ಟೆಯಲ್ಲಿ 528 ಮತದಾರರಿದ್ದಾರೆ. ನಿನ್ನೆ 9 ಮಂದಿ ಮಾತ್ರ ವೋಟ್ ಮಾಡಿದ್ದರು. ಮತದಾನ ಬಹಿಷ್ಕಾರ ವಿಚಾರ ಸಂಬಂಧ ಪೊಲೀಸರು ಹಾಗೂ ಇಂಡಿಗನತ್ತ, ಮೆಂದಾರೆ ಗ್ರಾಮಸ್ಥರ ನಡುವೆ ವಾಗ್ವಾದ ನಡೆದು ಗಲಾಟೆಯಾಗಿದೆ. ಘಟನೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ಸಿ.ಟಿ ಶಿಲ್ಪಾ ನಾಗ್ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದರು.




Leave a Reply

Your email address will not be published. Required fields are marked *

error: Content is protected !!