ಪ್ರಜಾಸ್ತ್ರ ಸುದ್ದಿ
ವಿಜಯಪುರ: ವಿಜಯಪುರ ಲೋಕಸಭಾ (ಪ.ಜಾ ಮೀಸಲು) ಕ್ಷೇತ್ರದ ಕಣದಲ್ಲಿ ಅಂತಿಮವಾಗಿ 8 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ಒಟ್ಟು 21 ಅಭ್ಯರ್ಥಿಗಳಿಂದ 35 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ 12 ಅಭ್ಯರ್ಥಿಗಳ ನಾಮಪತ್ರ ಸ್ವೀಕೃತಗೊಂಡಿದ್ದವು.
ನಾಮಪತ್ರ ಹಿಂಪಡೆಯವ ದಿನವಾದ ಸೋಮವಾರ ನಾಲ್ವರು ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ 8 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ಬಿಜೆಪಿ ರಮೇಶ ಜಿಗಜಿಣಗಿ, ಕಾಂಗ್ರೆಸ್ ನ ರಾಜು ಆಲಗೂರ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಪಕ್ಷದ ನಾಗಜ್ಯೋತಿ ಬಿ.ಎನ್, ಕರ್ನಾಟಕ ರಾಷ್ಟ್ರ ಸಮಿತಿಯ ಗಣಪತಿ ಲಾ ರಾಠೋಡ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಪಕ್ಷದ ಜೀತೇಂದ್ರ ಅಶೋಕ ಕಾಂಬಳೆ, ರಾಷ್ಟ್ರೀಯ ಸಮಾಜ ಪಕ್ಷದ ರಾಜಕುಮಾರ ಅಪ್ಪಣ್ಣಾ ಹೊನ್ನಕಟ್ಟಿ, ನಕಿ ಭಾರತೀಯ ಏಕತಾ ಪಾರ್ಟಿಯ ರಾಮಜಿ ಹರಿಜನ್ ಉರ್ಫ್ ಬುದ್ಧಪ್ರೀಯ ಹಾಗೂ ಪಕ್ಷೇತರ ಅಭ್ಯರ್ಥಿ ತಾರಾಬಾಯಿ ಭೋವಿ ಕಣದಲ್ಲಿ ಉಳಿದುಕೊಂಡಿದ್ದಾರೆ.