ಪ್ರಜಾಸ್ತ್ರ ಸುದ್ದಿ
ಮಂಗಳೂರು: ಲೋಕಸಭಾ ಚುನಾವಣೆಯ ರಾಜ್ಯದಲ್ಲಿ ಮೊದಲ ಹಂತದ ಮತದಾನ 14 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಮಂಗಳೂರಿನ ಕಪಿತಾನಿಯೂನಲ್ಲಿ ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಮಾಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಆರ್.ಪದ್ಮರಾಜ್ ಮತದಾನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ, ವ್ಯಕ್ತಿಯೊಬ್ಬ ಬಂದು ಬರೀ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ಪ್ರಚಾರ ಅಂತಾ ರೇಗಾಡಿದ್ದಾನೆ. ಪೊಲೀಸರು ಬಂದು ಪರಿಸ್ಥಿತಿ ನಿಭಾಯಿಸಲು ಹೋದಾಗ ಹಲ್ಲೆ ಮಾಡಲು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ.