ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ಮಧು ಬಂಗಾರಪ್ಪಗೆ ಎಐಸಿಸಿ ಹುದ್ದೆ ನೀಡಿದೆ. ಕೆಪಿಸಿಸಿಯ ಒಬಿಸಿ ಘಟಕದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪನವರನ್ನು ನೇಮಿಸಿದೆ.
ಎಐಸಿಸಿ ಒಬಿಸಿ ಘಟಕದ ಅಧ್ಯಕ್ಷ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ಈ ಬಗ್ಗೆ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಿದ್ದಾರೆ. ಕಳೆದ ಜುಲೈನಲ್ಲಿ ಮಧು ಬಂಗಾರಪ್ಪ ಹುಬ್ಬಳ್ಳಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.