ಪ್ರಜಾಸ್ತ್ರ ಸುದ್ದಿ
ಭೋಪಾಲ್: ಈ ವರ್ಷಾಂತ್ಯಕ್ಕೆ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಧ್ಯಪ್ರದೇಶ ಚುನಾವಣೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಮಾತನಾಡಿ, ಕರ್ನಾಟಕ ಮಾದರಿಯ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ್ದಾರೆ.
ಪ್ರತಿ ಮಹಿಳೆಗೆ 1,500 ರೂಪಾಯಿ, 500 ರೂಪಾಯಿಗೆ ಗ್ಯಾಸ್, 200 ಯುನಿಟ್ ಉಚಿತ ವಿದ್ಯುತ್, ಹಿಂದೂಳಿದವರಿಗೆ ಶೇಕಡ 27ರಷ್ಟು ಮೀಸಲಾತಿ ಸೇರಿದಂತೆ ಅನೇಕ ಘೋಷಣೆಗಳನ್ನು ಮಾಡಿದ್ದಾರೆ. ಈ ಬಾರಿ ಜನತೆಗೆ ಕಾಂಗ್ರೆಸ್ ಗೆಲ್ಲಿಸುತ್ತಾರೆ. ಬಿಜೆಪಿ ದುರಾಡಳಿತದಿಂದ ಬೇಸತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಸೆಪ್ಟೆಂಬರ್ 19ರಂದು ಜನ್ ಆಕ್ರೋಶ್ ಯಾತ್ರೆಯನ್ನು ಮಾಡಲು ಸಿದ್ಧತೆ ನಡೆಸಿದೆ. ರಾಜ್ಯದ 7 ಕಡೆ ಈ ಯಾತ್ರೆ ನಡೆಯಲಿದೆ. 225 ತಿಂಗಳಲ್ಲಿ 250 ಹಗರಣಗಳನ್ನು ಮಾಡಿದೆ. 18 ವರ್ಷಗಳ ಕಾಲದ ಶಿವರಾಜ್ ಸಿಂಗ್ ಚೌಹಾಣ್ ಆಡಳಿತದ ವಿರುದ್ಧ ಜನರು ಆಕ್ರೋಶ ಹೊಂದಿದ್ದಾರೆ ಎಂದು ಹೇಳಿದರು. ಮಧ್ಯಪ್ರದೇಶ 230 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ.