ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಹದಾಯಿ ಯೋಜನೆ ಬಗ್ಗೆ ಕೇಂದ್ರವು ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಖುಷಿಯ ಜೊತೆಗೆ ಇನ್ನೊಂದು ಖುಷಿಯನ್ನ ಸಚಿವರು ನೀಡಿದ್ದಾರೆ.
ದಶಕಗಳ ಕಾಲ ಮಹದಾಯಿ ಯೋಜನೆಗಾಗಿ ಹೋರಾಟ ಮಾಡಿಕೊಂಡು ಬರ್ತಿರುವ ರೈತ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲಾಗುವುದು ಎಂದು ಹೇಳಿದ್ದಾರೆ. ಈ ಯೋಜನೆಗಾಗಿ ಸಾವಿರಾರು ಹೋರಾಟಗಾರರು ಬೀದಿಗೆ ಇಳಿದಿದ್ದಾರೆ. ಇವರ ಮೇಲಿನ ಕೇಸ್ ನ್ನು ಶೀಘ್ರದಲ್ಲೇ ವಾಪಸ್ ಪಡೆಯಲಾಗುವುದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ಆದಷ್ಟು ಬೇಗ ಪ್ರಕಟಣೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.