ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಸುಮಾರು 20 ವರ್ಷಗಳಕ್ಕಿಂತ ಹೆಚ್ಚು ಕಾಲದಿಂದ ಹೋರಾಟ ಮಾಡಿಕೊಂಡು ಬರುತ್ತಿರುವ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆಯಂತೆ. ಕೇಂದ್ರ ಜಲಶಕ್ತಿ ಇಲಾಖೆ ಒಪ್ಪಿಗೆ ನೀಡಿದ್ದು, ದಸರಾ ನಂತರ ಕಾಮಗಾರಿ ಶುರುವಾಗಲಿದೆ ಎಂದು ಹೇಳಲಾಗುತ್ತಿದೆ.
ದಸರಾ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆಗಳಿವೆ. ಹೀಗಾಗಿ ಕೇಂದ್ರ ಜಲಶಕ್ತಿ ಇಲಾಖೆ ನೀಡಿರುವ ಅನುಮೋದನೆ ಆದೇಶ ಪತ್ರ ರಾಜ್ಯ ಸರ್ಕಾರದ ಕೈಗೆ ಮುಂದಿನ ವಾರ ಸಿಗಲಿದ್ದು, ನಂತರ ಕಾಮಗಾರಿಗೆ ಚಾಲನೆ ಸಿಗಲಿದೆ. ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಹಾಗೂ ಅಂತಾರಾಜ್ಯ ನದಿ ನೀರು ವಿವಾದ ಪ್ರಾಧಿಕಾರ ಅನುಮತಿ ನೀಡಿವೆ.