‘ಮಹಾ’ಮೈತ್ರಿ ಭವಿಷ್ಯ ನುಡಿದ ಹೆಚ್ಡಿಡಿ

372

ಮೈಸೂರು: ಮಹಾರಾಷ್ಟ್ರದಲ್ಲಿ ರಚನೆಯಾಗಿರುವ ಮಹಾ ಮೈತ್ರಿ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ. ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಿದ್ರೆ ರಾಜಕೀಯ ಚಿತ್ರಣ ಬದಲಾಗಬಹುದು ಅಂತಾ ಹೇಳಿದ್ದಾರೆ.

ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಒಂದಾಗುತ್ತೆ ಎಂದು ಯಾರು ಊಹಿಸಿಕೊಂಡಿದ್ರು. ಪ್ರಸ್ತುತ ರಾಜಕೀಯ ಪರಿಸ್ಥಿತಿ ಬೇರೆಯದ್ದೆ ಸ್ವರೂಪ ಪಡೆದುಕೊಂಡಿದೆ. ಏಕಪಕ್ಷೀಯ ನಿರ್ಧಾರಗಳ ಬಗ್ಗೆ ದೇಶದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.

ಇಡಿ, ಐಟಿ, ಸಿಬಿಐ ಸಂಸ್ಥೆಗಳನ್ನ ಬಳಸಿಕೊಂಡು ಇತರೆ ಪಕ್ಷಗಳನ್ನ ಹೆದರಿಸುವ ಕೆಲಸವನ್ನ ಕೇಂದ್ರದ ಬಿಜೆಪಿ ಸರ್ಕಾರ ಮಾಡ್ತಿದೆ. ಇದನ್ನ ದೇಶದ ಜನರು ಗಮನಿಸ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಸರ್ಕಾರ ಹೇಗೆ ಕೆಲಸ ಮಾಡುತ್ತೆ ಅನ್ನೋದು ಮುಖ್ಯವಾಗಿದೆ ಅಂತಾ ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!