ಪ್ರಜಾಸ್ತ್ರ ಸುದ್ದಿ
ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌವಾಣ್ ಮಂಗಳವಾರ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಇದಕ್ಕೂ ಮೊದಲು ಮಾತನಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಹೊಸ ಆರಂಭ. ಮಹಾರಾಷ್ಟ್ರದ ಅಭಿವೃದ್ಧಿಗೆ ನಾವು ಕೆಲಸ ಮಾಡುತ್ತೇವೆ ಎಂದರು.
ಮುಂಬೈ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಇದೇ ವೇಳೆ ಕಾಂಗ್ರೆಸ್ ಮಾಜಿ ಎಂಎಲ್ಸಿ ಅಮರ್ ರಾಜರ್ಕರ್ ಸಹ ಬಿಜೆಪಿ ಸೇರಿದರು. ಈ ವೇಳೆ ಡಿಸಿಎಂ ದೇವೇಂದ್ರ ಫಡ್ನಾವಿಸ್ ಸೇರಿ ಇತರರು ಹಾಜರಿದ್ದರು.
ಅಶೋಕ್ ಚೌವಾಣಗೆ ರಾಜ್ಯಸಭಾ ಸ್ಥಾನ ನೀಡಲಾಗುತ್ತೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ಮಾಜಿ ಶಾಸಕ ಬಾಬಾ ಸಿದ್ದಿಕಿ, ಮಾಜಿ ಸಂಸದ ಮಿಲಿಂದ್ ದಿಯೋರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದಾರೆ.