ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ ಸಿಪಿ ಮೈತ್ರಿ ಸರ್ಕಾರ ರಚನೆಯಾಗಿ ಒಂದು ತಿಂಗಳಾಗಿದೆ. ಉದ್ಧವ್ ಠಾಕ್ರೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿ 32 ದಿನಗಳ ಬಳಿಕ ಇಂದು ಸಚಿವ ಸಂಪುಟ ವಿಸ್ತರಣೆಯಾಗ್ತಿದೆ.
ಮಹಾ ವಿಕಾಸ್ ಅಘಾಡಿ ಸರ್ಕಾರದ 36 ಶಾಸಕರು ಇಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಎನ್ ಸಿಪಿ ಲೀಡರ್ ಅಜಿತ ಪವಾರ ಪದಗ್ರಹಣ ಮಾಡಲಿದ್ದಾರೆ. ಈ ಮೂಲಕ ಶಿವಸೇನೆಯಿಂದ 15 ಶಾಸಕರು, ಕಾಂಗ್ರೆಸ್ ನಿಂದ 12 ಹಾಗೂ ಎನ್ ಸಿಪಿಯಿಂದ 14 ಶಾಸಕರು ಮಂತ್ರಿಯಾಗಲಿದ್ದಾರೆ.