ಕಲಬುರಗಿ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಬಂದಿದೆ. ನೆರೆಯ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನ ಮೈತ್ರಿಗೆ ಮತದಾರ ಜೈ ಅಂದಿದ್ದಾನೆ. ಹರಿಯಾಣದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಮಾತ್ನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಹಾರಾಷ್ಟ್ರದಲ್ಲಿ ಸಂಪನ್ಮೂಲದ ಕೊರತೆಯಾಯ್ತು. ಆದ್ರೂ ಉತ್ತಮ ಫಲಿತಾಂಶ ಬಂದಿದೆ ಅಂತಾ ಹೇಳಿದ್ರು. ಹರಿಯಾಣದಲ್ಲಿ ಬಿಜೆಪಿಗೆ ಬಹುಮತವಿಲ್ಲ. ವಿರೋಧ ಪಕ್ಷಗಳು ಒಂದಾದ್ರೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಬಹುದು ಅಂತಾ ಹೇಳಿದ್ರು.
ಮಹಾರಾಷ್ಟ್ರ ಹಾಗೂ ಹರಿಯಾಣದ ಜನತೆಗೆ ಅಭಿನಂದನೆ ಸಲ್ಲಿಸಿದ ಅವರು, ಮಹಾರಾಷ್ಟ್ರದಲ್ಲಿ ಇನ್ನು ಹೆಚ್ಚಿನ ಸ್ಥಾನಗಳು ಬರುವ ನಿರೀಕ್ಷೆಯಿದೆ ಅಂತಾ ಹೇಳಿದ್ದಾರೆ.