ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಶೀಘ್ರವಾಗಿ ಸಭೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಎಂ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತ್ನಾಡಿದ ಅವರು, ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುವ ಕುರಿತು ಸಿಎಂ ಸಭೆ ನಡೆಸ್ತಿದ್ದಾರೆ ಅಂತಾ ಹೇಳಿದ್ರು.
ಸಭೆ ಬಳಿಕ ಕಾನೂನಾತ್ಮಕ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ. ರಾಜ್ಯವನ್ನ ಪ್ರತಿನಿಧಿಸುವ ಓರ್ವ ವಕೀಲರನ್ನ ನೇಮಕ ಮಾಡಿ ಕಾನೂನು ಹೋರಾಟ ಮಾಡುತ್ತೇವೆ. ಮಹಾಜನ್ ವರದಿ ಪ್ರಕಾರ ವಿಷಯ ಬಗೆಹರಿದಿದೆ. ಆದರೆ, ರಾಜಕೀಯ ಲಾಭಕ್ಕಾಗಿ ಮಹಾರಾಷ್ಟ್ರ ಸಿಎಂ ಪದೆಪದೆ ಕ್ಯಾತೆ ತೆಗೆಯುತ್ತಿದ್ದಾರೆ ಅಂತಾ ಹೇಳಿದ್ರು. ಈ ಹಿಂದೆ ಶರದ್ ಪವಾರ ಮಹಾರಾಷ್ಟ್ರ ಕರ್ನಾಟಕ ಗಡಿ ಸಮಸ್ಯೆ ಇಲ್ಲಿಗೆ ಮುಗೀತು ಎಂದು ಹೇಳಿಕೆ ಕೊಟ್ಟಿದ್ರು. ಅದನ್ನ ಸಿಎಂ ಉದ್ಧವ್ ಠಾಕ್ರೆಗೆ ನೆನಪು ಮಾಡಿಕೊಡುತ್ತೇವೆ ಅಂತಾ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.