ಪ್ರಜಾಸ್ತ್ರ ಸುದ್ದಿ
ಮುಂಬೈ: ಮಹಾರಾಷ್ಟ್ರದ 19ನೇ ಮುಖ್ಯಮಂತ್ರಿಯಾಗಿ ಗುರುವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಬಿಜೆಪಿಯೊಂದಿಗೆ ಸೇರಿ ಹೊಸ ಸರ್ಕಾರ ರಚನೆ ಮಾಡಿದ್ದಾರೆ. ಶಿವಸೇನೆ ಹಾಗೂ ಬಿಜೆಪಿ ಸಂಬಂಧ ಇಂದಿನಂದಲ್ಲ. ಆದರೆ, ಕಳೆದ ಚುನಾವಣೆಯಲ್ಲಿ ಬಿರುಕು ಮೂಡಿದ ಪರಿಣಾಮ ಕಾಂಗ್ರೆಸ್, ಎನ್ ಸಿಪಿ ಜೊತೆಗೂಡಿ ಉದ್ಧವ್ ಠಾಕ್ರೆ ಸರ್ಕಾರ ರಚನೆ ಮಾಡಿದ್ದರು. ಠಾಕ್ರೆ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದ ಶಿಂಧೆ ಬಂಡಾಯವೆಂದು ಈಗ ಸಿಎಂ ಆಗಿದ್ದಾರೆ.
ನೂತನ ಸಿಎಂ ಏಕನಾಥ್ ಶಿಂಧೆ ವಿರುದ್ಧ 18 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇದುವರೆಗೂ ಒಂದೇ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿಲ್ಲ. 1993ರಿಂದ 20021ರವರೆಗಿನ ಸಂದರ್ಭದಲ್ಲಿ ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚಿರುವುದು, ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿರುವುದು, ನಿಷೇಧಾಜ್ಞೆ ಉಲ್ಲಂಘಿಸಿ ಶಾಂತಿ ಸುವ್ಯವಸ್ಥೆ ಕದಡಿರುವುದು, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿರುವುದು ಸೇರಿದಂತೆ 18 ಕೇಸ್ ಗಳು ದಾಖಲಾಗಿವೆ. ಇದು ಚುನಾವಣೆ ಆಯೋಗಕ್ಕೆ ಅವರು ಸಲ್ಲಿಸಿದ ಮಾಹಿತಿಯಲ್ಲಿಯೇ ಇದೆ. ಒಂದೇ ಒಂದು ಕೇಸಿನಲ್ಲಿ ಶಿಕ್ಷೆಯಾಗಿಲ್ಲ ಅನ್ನೋದು ಸೋಜಿಗ.