ಸುಪ್ರೀಂನಲ್ಲಿ ಸಿಎಂ ಶಿಂದೆ ಬಣಕ್ಕೆ ಜಯ

87

ಪ್ರಜಾಸ್ತ್ರ ಸುದ್ದಿ

ಮುಂಬೈ: ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರ ಮರುಸ್ಥಾಪನೆ ಸಂಬಂಧ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲು ಸೇರಿದ್ದರು. ಆದರೆ, ಗುರುವಾರ ನಡೆದ ವಿಚಾರಣೆಯಲ್ಲಿ ಸುಪ್ರಿಂ ಕೋರ್ಟ್ ಅಘಾಡಿ ಸರ್ಕಾರ ಮರು ಸ್ಥಾಪನೆ ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ.

ಸುಪ್ರೀಂ ತೀರ್ಪಿನಿಂದಾಗಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಹಾಗೂ ಬೆಂಬಲ ನೀಡಿ ಸರ್ಕಾರ ರಚನೆ ಮಾಡಿರುವ ಬಿಜೆಪಿ ಪಡೆಗೆ ಸಮಾಧಾನವಾಗಿದೆ.

ಅಘಾಡಿ ಸರ್ಕಾರದ ವಿರುದ್ಧ ಏಕನಾಥ್ ಶಿಂದೆ ನೇತೃತ್ವದಲ್ಲಿ 15 ಶಾಸಕರು ಬಂಡಾಯವೆದಿದ್ದರು. ಅವರೆಲ್ಲ ಬಿಜೆಪಿಗೆ ಬೆಂಬಲ ಸೂಚಿಸಿದ ಪರಿಣಾಮ ಎನ್ ಸಿಪಿ, ಕಾಂಗ್ರೆಸ್ ಜೊತೆ ಕೂಡಿಕೊಂಡು ಸರ್ಕಾರ ರಚನೆ ಮಾಡಿದ್ದ ಉದ್ಧವ್ ಠಾಕ್ರೆ ಸರ್ಕಾರ ಪತನವಾಯಿತು.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಬಹುಮತಕ್ಕೆ ಸೂಚಿಸಿದ ನಿರ್ಧಾರ ತಪ್ಪು ಎಂದು ಸುಪ್ರೀಂ ಕೋರ್ಟ್ ಹೇಳಿದೆ.




Leave a Reply

Your email address will not be published. Required fields are marked *

error: Content is protected !!