ಪ್ರಜಾಸ್ತ್ರ ಸುದ್ದಿ
ಮುಂಬೈ: ರಾಷ್ಟ್ರಪತಿ ಮಹಾತ್ಮ ಗಾಂಧಿ ಅವರ ಮೊಮ್ಮಗ, ಲೇಖಕ ಅರುಣ್ ಗಾಂಧಿ(89) ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅರುಣ್ ಗಾಂಧಿ ಅವರ ನಿಧನದ ಬಗ್ಗೆ ಮಗ ತುಷಾರ್ ಗಾಂಧಿ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಣಿಲಾಲ್ ಗಾಂಧಿ ಹಾಗೂ ಸುಶೀಲಾ ಮಶ್ರುವಾಲಾ ದಂಪತಿಯ ಮಗನಾಗಿ ಏಪ್ರಿಲ್ 14, 1934ರಲ್ಲಿ ಜನಿಸಿದರು. ತಾತನ ಹಾದಿಯಲ್ಲಿ ಸಾಗಿದ ಇವರು ಹಲವು ಕೃತಿಗಳನ್ನು ಬರೆದಿದ್ದಾರೆ. ‘ದಿ ಗಿಫ್ಟ್ ಆಫ್ ಆಂಗರ್: ಅಂಡ್ ಅದರ್ ಲೆಸನ್ಸ್ ಫ್ರಂ ಮೈ ಗ್ರ್ಯಾಂಡ್ ಫಾದರ್ ಮಹಾತ್ಮ ಗಾಂಧಿ’ ಕೃತಿ ಪ್ರಮುಖವಾಗಿದೆ. ಕೊಲ್ಹಾಪುರದಲ್ಲಿರುವ ಗಾಂಧಿ ಫೌಂಡೇಶನ್ ಆವರಣದಲ್ಲಿ ಸಂಜೆ 6.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಲಾಗಿದೆ.