ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಭೀಮಾತೀರದ ಮಹಾದೇವ ಭೈರಗೊಂಡ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನ ಬಂಧಿಸಲಾಗಿದೆ. ಟಿಪ್ಪರ್ ಚಾಲಕ ಉಮರಾಣಿಯ ನಾಗಪ್ಪ ಪೀರಗೊಂಡ ಹಾಗೂ ವಿಜಂತು ತಾಳಿಕೋಟೆ ಅನ್ನೋ ಇಬ್ಬರನ್ನ ಬಂಧಿಸಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತ್ನಾಡಿರುವ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಹಳೆಯ ದ್ವೇಷ ಹಾಗೂ ಗ್ಯಾಂಗ್ ಕಟ್ಟಿಕೊಳ್ಳುವ ಶೋಕಿಯಿಂದಾಗಿ ಈ ಕೃತ್ಯವೆಸಗಲಾಗಿದೆ. ಮಡಿವಾಳ ಹಿರೇಮಠ ಸ್ವಾಮಿ ಎಂಬಾತ ಕೇಂದ್ರ ವ್ಯಕ್ತಿಯಾಗಿದ್ದಾನೆ ಎಂದಿದ್ದಾರೆ.
ಕಳೆದ ಆರೇಳು ತಿಂಗಳುಗಳಿಂದ ಪುಣೆ ಸೇರಿ ಮುಂತಾದ ಕಡೆಗಳಲ್ಲಿ ಯುವಕರನ್ನು ಕಟ್ಟಿಕೊಂಡು ಫೈನಾನ್ಸ್ ನಡೆಸಿ, ಯುವಕರಿಗೆ ದಾರಿ ತಪ್ಪಿಸಿ ಗ್ಯಾಂಗ್ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾನೆ ಎಂದರು. ಇನ್ನು ಭೀಮಾತೀರದ ಹಂತಕ ಧರ್ಮರಾಜ ಚಡಚಣ ಹಳೆಯ ಸಹಚರರು ಈ ಕೃತ್ಯದಲ್ಲಿ ಭಾಗಿಯಾಗಿದ್ದು ತನಿಖೆಯಲ್ಲಿ ತಿಳಿದುಬಂದಿದೆ. ಅವರನ್ನ ಆದಷ್ಟು ಬೇಗ ಬಂಧಿಸಲಾಗಿವುದು ಎಂದು ಐಜಿಪಿ ಸುಹಾಸ್ ತಿಳಿಸಿದ್ದಾರೆ.