ಬೆಂಗಳೂರು: ಸಾಮಾಜಿಕ ಹೋರಾಟಗಾರ, ಪ್ರಗತಿಪರ ಚಿಂತಕ ಮಹೇಂದ್ರಕುಮಾರ ಇಂದು ನಸುಕಿನಜಾವ ನಿಧನರಾಗಿದ್ದಾರೆ. 47 ವರ್ಷದ ಮಹೇಂದ್ರಕುಮಾರ, ಅವರಿಗೆ ಕಳೆದ ಮಧ್ಯರಾತ್ರಿ ತೀವ್ರ ಎದೆನೋವು ಕಾಣಸಿಕೊಂಡಿತ್ತು. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ನಸುಕಿನಜಾವ ನಿಧನರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಮೊದಲು ಭಜರಂಗದಳ ರಾಜ್ಯ ಸಂಚಾಲಕರಾಗಿ ಕೆಲಸ ಮಾಡಿದ್ರು. ಆದ್ರೆ, ನಂತರ ಅಲ್ಲಿಂದ ಹೊರ ಬಂದು ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡ್ರು. ಪ್ರಗತಿಪರ ಸಂಘಟನೆಗಳಲ್ಲಿ ಗುರುತಿಸಿಕೊಂಡರು. ಪ್ರಬುದ್ಧ ಭಾರತ ಸರಣಿ ಕಾರ್ಯಕ್ರಮಗಳ ಮೂಲಕ ಯುವಸಮೂಹದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡತೊಡಗಿದ್ರು.