ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

242

ಪ್ರಜಾಸ್ತ್ರ ಸುದ್ದಿ

ಮೈಸೂರು: ದಸರಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮಹಿಷ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 15ರಂದು ದಸರಾ ಉದ್ಘಾಟನೆಯಾಗಲಿದೆ. ಇದಕ್ಕೂ ಎರಡು ದಿನ ಮೊದಲು ಅಕ್ಟೋಬರ್ 13ರಂದ ಮಹಿಷ ದಸರಾ ಆಚರಣೆಗೆ ಅನುಮತಿ ನೀಡಬೇಕೆಂದು ಮಹಿಷ ದಸರಾ ಸಮಿತಿ ಕೇಳಿತ್ತು. ಅದೆ ದಿನ ಬಿಜೆಪಿಯಿಂದ ಮಹಿಷ ದಸರಾ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಮಾಡಲು ಸಹ ಮುಂದಾಗಿದ್ದು, ಎರಡಕ್ಕೂ ಅನುಮತಿ ನಿರಾಕರಿಸಲಿದೆ ಎಂದರು.

ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ಯಾರೇ ತಪ್ಪು ಮಾಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ. ಒಂದು ವೇಳೆ ಕಾರ್ಯಕ್ರಮ ಮಾಡಲು ಮುಂದಾದರೆ 144 ಸೆಕ್ಷನ್ ಜಾರಿ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!