ಮಳೆಗಾಗಿ ಬಾಲಕಿಯರ ಬೆತ್ತಲೆ ಮೆರವಣಿಗೆ

631

ಪ್ರಜಾಸ್ತ್ರ ಸುದ್ದಿ

ಭೋಪಾಲ್: ಮಳೆಗಾಗಿ ದೇವರ ಪೂಜೆ ನೆಪದಲ್ಲಿ ಬಾಲಕಿಯರ ಬೆತ್ತಲೆ ಮೆರವಣಿಗೆ ನಡೆದಿದೆ. ಮಧ್ಯಪ್ರದೇಶದ ಬುಂದೇಲಖಂಡದ ದಾಮೋಹ್ ಜಿಲ್ಲೆಯಲ್ಲಿ ಇಂತಹದೊಂದು ಅಮಾನವೀಯ ಘಟನೆ ನಡೆದಿದೆ. ಈ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದೆ.

ಇನ್ನು ಈ ಘಟನೆ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ದಾಮೋಹ್ ಜಿಲ್ಲೆಯ ಜಬೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಬನಿಯಾ ಅನ್ನೋ ಕಡೆ 6 ಬಾಲಕಿಯರ ಬೆತ್ತಲೆ ಮೆರವಣಿಗೆ ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ಡಿ.ಆರ್ ತನ್ವೀರ್ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!