ಖರ್ಗೆ ‘ನಾಯಿ’ ಹೇಳಿಕೆ.. ಸದನದಲ್ಲಿ ವಾಕ್ಸಮರ

209

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಂಸತ್ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ಸಂಬಂಧ ಸಂಸತ್ ಚಳಿಗಾಲದ ಅಧಿವೇಶನದ 11ನೇ ದಿನವಾದ ಮಂಗಳವಾರ ಕಾಂಗ್ರೆಸ್-ಬಿಜೆಪಿ ನಡುವೆ ಜಟಾಪಟಿ ನಡೆದಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಹಾಗೂ ಖರ್ಗೆ ನಡುವೆ ಮಾತಿನ ಸಮರ ನಡೆದು ರಾಜ್ಯಸಭೆಯಲ್ಲಿ ವಾಕ್ಸಮರ ನಡೆಯಿತು.

ಖರ್ಗೆ ಅವಾಚ್ಯ ಶಬ್ಧಗಳನ್ನು ಬಳಿಸಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದರು. ಸಚಿವ ಕಿರಣ್ ರಿಜಿಜು, ಕಾಂಗ್ರೆಸ್ ಅಧ್ಯಕ್ಷರು ಆಕ್ಷೇಪಾರ್ಯ ಹೇಳಿಕೆ ಕೊಡುತ್ತಾರೆ ಎಂದು ನಾನು ನಂಬಲ್ಲ ಎಂದರು. ಇದು ಮಹಾತ್ಮ ಗಾಂಧಿ, ಸರ್ದಾರ್ ವಲ್ಲಾಭಾಯ್ ಪಟೇಲ್ ಕಾಂಗ್ರೆಸ್ ಅಲ್ಲ ಎಂದು ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ್ ಖರ್ಗೆ, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ದೇಶದ ಐಕ್ಯತೆಗಾಗಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರ ಮನೆಯಿಂದ ಒಂದು ನಾಯಿಯೂ ಸಾಯಲಿಲ್ಲ ಎಂದರು. ಇದು ಸದನದಲ್ಲಿ ದೊಡ್ಡ ರಂಪಾಟಕ್ಕೆ ಕಾರಣವಾಯಿತು.




Leave a Reply

Your email address will not be published. Required fields are marked *

error: Content is protected !!