ಖರ್ಗೆಗೆ ಅದ್ಧೂರಿ ಸ್ವಾಗತ

261

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಮೇಲೆ ಮೊದಲ ಬಾರಿಗೆ ಕಲಬುರಗಿಗೆ ಆಗಮಿಸಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಕಳೆದ ವರ್ಷ ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಅದಾದ್ಮೇಲೆ ಅವರನ್ನು ಅವರನ್ನು ವಿಪಕ್ಷ ನಾಯಕನಾಗಿ ಘೋಷಿಸಲಾಯಿತು.

ಸುಮಾರು ಒಂದೂವರೆ ವರ್ಷದ ನಂತರ ಜಿಲ್ಲೆಗೆ ಆಗಮಿಸಿದ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ಧೂರಿ ಸ್ವಾಗತ ನೀಡಲಾಗಿದೆ. ವಿಮಾನ ನಿಲ್ದಾಣದಿಂದ ಭವಾನಿ ಕಲ್ಯಾಣಿ ಮಂಟಪದವರೆಗೂ ಭವ್ಯ ಮೆರವಣಿಗೆ ಮೂಲಕ ಕರೆದುಕೊಂಡು ಬರಲಾಯಿತು.

ಯಾದಗಿರಿ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆ, ತಾಲೂಕಿನ ಮುಖಂಡರು ಸಹ ಆಗಮಿಸಿದ್ದರು. ನೂರಾರು ಜನ ಕಾರ್ಯಕರ್ತರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.




Leave a Reply

Your email address will not be published. Required fields are marked *

error: Content is protected !!