ಕಲಬುರಗಿಯಿಂದ ಖರ್ಗೆ ಸ್ಪರ್ಧೆ?

93

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪಟ್ಟಿಗಾಗಿ ಕಳೆದ ಎರಡು ದಿನಗಳಿಂದ ಕಾಂಗ್ರೆಸ್ ಸಭೆ ನಡೆಸುತ್ತಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೈ ನಾಯಕರು ಹೇಳುತ್ತಿದ್ದಾರೆ.

ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಉಳಿದುಕೊಂಡು ಸಾಕಷ್ಟು ಚರ್ಚೆ ನಡೆಸಿದ್ದಾರೆ. ಕಲಬುರಗಿಯಿಂದ ಮಲ್ಲಿಕಾರ್ಜುನ್ ಖರ್ಗೆ  ಅವರ ಸ್ಪರ್ಧಿಸಬೇಕು ಎಂದು ಬೆಂಬಲಿಗರು ಹೇಳುತ್ತಿದ್ದಾರೆ. ಹೀಗಾಗಿ ಅವರೊಬ್ಬರ ಹೆಸರು ಪ್ರಸ್ತಾಪಿಸಲಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸಧ್ಯ ಅವರೊಬ್ಬರ ಹೆಸರು ಪ್ರಸ್ತಾಪಿಸಲಾಗಿದೆ. ಚುನಾವಣೆಗೆ ಸ್ಪರ್ಧಿಸವ ಅಂತಿಮ ನಿರ್ಧಾರ ಅವರಿಗೆ ಬಿಟ್ಟಿದ್ದು. ಎಐಸಿಸಿ ಅಧ್ಯಕ್ಷರಾಗಿರುವುದರಿಂದ ದೇಶ್ಯಾದ್ಯಂತ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿದೆ. ಹೀಗಾಗಿ ಅಂತಿಮ ನಿರ್ಧಾರ ಅವರೆ ತೆಗೆದುಕೊಳ್ಳಲಿದ್ದಾರೆ ಎಂದರು.




Leave a Reply

Your email address will not be published. Required fields are marked *

error: Content is protected !!