ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪಟ್ಟಣದ ವಿವೇಕಾನಂದ ಸರ್ಕಲ್ ಹತ್ತಿರದಲ್ಲಿನ ಮ್ಯಾನ್ ಹೋಲ್ ವೊಂದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಮ್ಯಾನ್ ಹೋಲ್ ಮೇಲಿನ ಸುರಕ್ಷಾ ಕವಚ ಕುಸಿದು ಬೀಳುವ ಹಂತದಲ್ಲಿದೆ. ಇದರಿಂದಾಗಿ ಪಾದಚಾರಿಗಳಿಗೆ, ವಾಹನ ಸವಾರರಿಗೆ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ.
ಈ ಭಾಗದಲ್ಲಿ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತವೆ. ಸಾರ್ವಜನಿಕರಿಗೆ ತೊಂದರೆಯಾಗುವ ಮೊದಲೇ ಇದನ್ನು ಸರಿಪಡಿಸಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದೆ ರೀತಿ ಪಟ್ಟಣದ ಹಲವು ಕಡೆ ಮ್ಯಾನ್ ಹೋಲ್ ಸಮಸ್ಯೆಯಿದ್ದು, ಕೂಡಲೇ ಅವುಗಳನ್ನು ಸಹ ಸರಿಪಡಿಸಬೇಕೆಂದು ಒತ್ತಾಯಿಸಲಾಗಿದೆ.