ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕೌಟುಂಬಿಕ ಕಹಲಕ್ಕೆ ಬೇಸತ್ತು ಭೀಮಾನದಿಗೆ ಜಿಗಿದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಿಂದಗಿ ತಾಲ್ಲೂಕಿನ ದೇವಣಗಾಂವ ಬ್ರಿಡ್ಜ್ ನಲ್ಲಿ ಈ ಘಟನೆ ನಡೆದಿದೆ.
ದೇವಣಗಾಂವ ನಿವಾಸಿ ಭೀಮಾಶಂಕರ ಸಿದ್ದಪ್ಪ ಅಳ್ಳಗಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತದೇಹ ಶೋಧ ಕಾರ್ಯ ನಡೆಸಲಾಗುತ್ತಿದೆ.