ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್

245

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಬಹುತೇಕ ಏಪ್ರಿಲ್ 19ರಂದು ನಾಮಪತ್ರ ಸಲ್ಲಿಕೆಯಾಗಿದ್ದು, ಇಂದು ಬಾಕಿ ಉಳಿಸಿಕೊಂಡಿರುವ ಕ್ಷೇತ್ರಗಳ ನಾಮಪತ್ರ ಸಲ್ಲಿಕೆಯನ್ನು ಅಭ್ಯರ್ಥಿಗಳು ನಡೆಸಲಿದ್ದಾರೆ. ಆದರೆ, ಇಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆಯಾಗಿದೆ.

ಮಾಜಿ ಶಾಸಕ ಮೊಯಿದ್ದಿನ್ ಬಾವಾಗೆ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ನಾಮಪತ್ರ ಸಲ್ಲಿಸಲು ಸಜ್ಜಾಗಿರುವ ಹೊತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿದ್ದು, ಇನಾಯತ್ ಅಲಿಗೆ ಟಿಕೆಟ್ ಘೋಷಿಸಿದೆ. ಇದರಿಂದಾಗಿ ಬಾವಾ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ನಡೆದುಕೊಂಡಿರುವ ರೀತಿಗೆ ಸಿಡಿದೆದ್ದು ಜೆಡಿಎಸ್ ನಿಂದ ಬಿ ಫಾರಂ ಪಡೆದು ಸ್ಪರ್ಧಿಸಲು ನಿರ್ಧಾರಿಸಿದ್ದಾರೆ ಎನ್ನಲಾಗುತ್ತಿದ್ದು, ಜೆಡಿಎಸ್ ನಾಯಕರು ಟಿಕೆಟ್ ನೀಡ್ತಾರಾ ಅನ್ನೋ ಪ್ರಶ್ನೆ ಇದೆ.




Leave a Reply

Your email address will not be published. Required fields are marked *

error: Content is protected !!