ಕರೋನಾ ಹಾಟ್ ಸ್ಪಾಟ್ ಮಂಡ್ಯಗೆ ಉಸ್ತುವಾರಿ ಸಚಿವ ದಿಢೀರ್ ಭೇಟಿ

348

ಮಂಡ್ಯ: ರಾಜ್ಯದಲ್ಲಿ ಕರೋನಾ ಹಾಟ್ ಸ್ಪಾಟ್ ಎನಿಸಿಕೊಂಡಿರುವ ಸಕ್ಕರೆನಾಡಿಗೆ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಇಂದು ಸಂಜೆ ದಿಢೀರ್ ಭೇಟಿ ಕೊಟ್ಟಿದ್ದಾರೆ.

ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನ ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು.

ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನ ಕರೆಸಿ ಸಭೆ ನಡೆಸಿದ್ರು. ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ ವ್ಯವಸ್ಥೆ ಸಮರ್ಪಕವಾಗಿ ಆಗಬೇಕು. ಕೆಲವೆಡೆ ಸರಿಯಾದ ವ್ಯವಸ್ಥೆ ಇಲ್ಲ ಎಂಬ ಆರೋಪ ಬಂದಿದೆ. ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದ್ರು.




Leave a Reply

Your email address will not be published. Required fields are marked *

error: Content is protected !!