ಅರ್ಚಕರ ಹತ್ಯೆ ಪ್ರಕರಣ: ಆರೋಪಿಗಳಿಗೆ ಬೆಳ್ಳಂಬೆಳಗ್ಗೆ ಗುಂಡೇಟು

330

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಅರಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಗುಂಡು ಹಾರಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಮಲಗಿದ್ದ ಮೂವರು ಆರೋಪಿಗಳನ್ನ ಶರಣಾಗಲು ಪೊಲೀಸರು ಸೂಚಿಸಿದ್ದಾರೆ. ಆದ್ರೆ, ಅವರು ಪೊಲೀಸರು ಮೇಲೆ ದಾಳಿ ಮಾಡಿ ಎಸ್ಕೇಪ್ ಆಗಲು ನೋಡಿದ್ದಾರೆ.

ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. ಮದ್ದೂರು ತಾಲೂಕು ಸಾದೊಳಲು ಗೇಟ್ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನ ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಶುಕ್ರವಾರ ದೇವಸ್ಥಾನದಲ್ಲಿನ ಹುಂಡಿ ಕಳ್ಳತನಕ್ಕೆ ಬಂದವರು ಮೂವರು ಅರ್ಚಕರನ್ನ ಹತ್ಯೆ ಮಾಡಿ ಎಸ್ಕೇಪ್ ಆಗಿದ್ರು.




Leave a Reply

Your email address will not be published. Required fields are marked *

error: Content is protected !!