2 ದಿನಗಳಲ್ಲಿ ಮಂಡ್ಯ ಸ್ಪರ್ಧೆ ಬಗ್ಗೆ ನಿರ್ಧಾರ: ಹೆಚ್ಡಿಕೆ

83

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ಸೀಟು ಹಂಚಿಕೆಯಲ್ಲಿ ಮಂಡ್ಯ ಜೆಡಿಎಸ್ ಪಾಲಾಗಿದೆ. ಅಲ್ಲಿ ಸ್ಪರ್ಧಿಸುವ ಬಗ್ಗೆ ಎನ್ನೆರಡು ದಿನಗಳಲ್ಲಿ ನಿರ್ಧಾರ ತಿಳಿಸುತ್ತೇನೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಹೇಳಿದರು.

ಚೆನ್ನೈನಲ್ಲಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಇಂದು ಬೆಂಗಳೂರಿಗೆ ವಾಪಸ್ ಆದರು. ಈ ವೇಳೆ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇನ್ನೂ ಮೂರ್ನಾಲ್ಕು ದಿನಗಳಲ್ಲಿ ನನಗೆ ನಡೆಯಲು ಆಗಬಹುದು. ಎಚ್ಚರಿಕೆಯಿಂದ ಇರಲು ವೈದ್ಯರು ಹೇಳಿದ್ದಾರೆ. 3ನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆಯಾಗಿದೆ. ಜನರ ಸೇವೆ ಮಾಡಲು ದೇವರು ಕಾಪಾಡಿದ್ದಾನೆ ಎಂದರು.

ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ತೆರಿಗೆ ನಮ್ಮ ಹಕ್ಕು ಅನ್ನೋ ಡ್ರಾಮಾ ಬಿಟ್ಟು ಜನಪರ ಕೆಲಸ ಮಾಡಲಿ ಎಂದರು.




Leave a Reply

Your email address will not be published. Required fields are marked *

error: Content is protected !!