ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದಲ್ಲಿನ ಮಂದಿರ ಹಾಗೂ ಮಸೀದಿಗಳಲ್ಲಿ ಬಳಸುವ ಧ್ವನಿವರ್ಧಕಗಳ ಶಬ್ಧವನ್ನು ತಗ್ಗಿಸದೆ ಹೋದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.
ಜನರ ಸಮಸ್ಯೆ ಆಲಿಸುವ ಸಂಬಂಧ ಟ್ವೀಟರ್ ಲೈವ್ ಕಾರ್ಯಕ್ರಮ ನಡೆಸಿದರು. ಈ ವೇಳೆ ಸಾರ್ವಜನಿಕರು ಹಲವಾರು ಸಮಸ್ಯೆಗಳನ್ನು ಹೇಳಿಕೊಂಡರು. ಅದೆ ರೀತಿ ಮಂದಿರ ಹಾಗೂ ಮಸೀದಿಗಳಲ್ಲಿ ನಿಗದಿತ ಡಿಸಿಬಲ್ ಗಿಂತ ಹೆಚ್ಚಿನದ ಶಬ್ಧ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಅನ್ನೋ ಎಚ್ಚರಿಕೆ ನೀಡಿದರು.