ರಾಜಧಾನಿಯಲ್ಲಿ ಇನ್ನೂ 2 ದಿನ ಮಳೆ: ಸೋಂಕಿನ ಬಗ್ಗೆ ಎಚ್ಚರ

165

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಕಾರ್ನಾಟಕದ ಮೇಲೂ ಆಗಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ರಾಜಧಾನಿಯಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆಯಂತೆ.

ಈಗಾಗ್ಲೇ ಮಳೆ, ಭರ್ಜರಿ ಶೀತಗಾಳಿಯಿಂದ ಜನರು ತತ್ತರಿಸಿದ್ದಾರೆ. ವಾರಂತ್ಯದ ವೇಳೆಯೂ ಮನೆಯಿಂದ ಹೊರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಮವಾರದಿಂದ ಕಚೇರಿಗಳಿಗೆ ತೆರಳುವವರು, ಶಾಲಾ, ಕಾಲೇಜುಗಳಿಗೆ ಹೋಗುವವರು ಸೇರಿ ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ನೆಗಡಿ, ಕೆಮ್ಮು, ಜ್ವರ ಬಂದರೆ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚು. ಹೀಗಾಗಿ ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!