ಪ್ರಜಾಸ್ತ್ರ ಸುದ್ದಿ
ಮಂಗಳೂರು: ಆಟೋದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಇದೊಂದು ಉಗ್ರರ ಕೃತ್ಯವೆಂದು ಹೇಳಲಾಗಿದ್ದು, ಶಿವಮೊಗ್ಗದ ತೀರ್ಥಹಳ್ಳಿಯ ಐದು ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ತುಮಕೂರು, ಮೈಸೂರು, ಮಂಗಳೂರು ಸೇರಿದಂತೆ ಶಂಕಿತ ಉಗ್ರರು ಎಂದು ಹೇಳಲಾಗುತ್ತಿರುವವರ ಮನೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಮಂಗಳೂರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದ ಪೊಲೀಸರು ಬಂಧಿತ ಮಾಜ್, ಮೋಸ್ಟ್ ವಾಂಟೆಡ್ ಮತೀನ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಇನ್ನು ಸಾಜಿದ್ ಹಾಗೂ ಶಾರೀಕ್ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಿ ತಪಾಸಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯನವರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ.