ಶಿವಮೊಗ್ಗ: ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತ್ನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಈ ಕೇಸ್ ನಲ್ಲಿ ಯಾರೇ ತಪ್ಪಿತಸ್ಥರಿದ್ರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತೆ ಅಂತಾ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಬಾರದು. ನಾವು ಪೊಲೀಸರ ಜೊತೆ ಇರುತ್ತೇವೆ ಅನ್ನೋ ಧೈರ್ಯ ತುಂಬಬೇಕು ಅಂತಾ ಹೇಳಿದ್ದಾರೆ. ಪೊಲೀಸ್ ಇಲಾಖೆಯೇ ಬಾಂಬ್ ಇಟ್ಟಿದೆ ಅನ್ನೋ ರೀತಿಯಲ್ಲಿ ಮಾತ್ನಾಡಬಾರದು. ರಾಜ್ಯ ಸರ್ಕಾರವನ್ನ ಸಮರ್ಥನೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಅಂತಾ ಸಚಿವರು ಹೇಳಿದ್ದಾರೆ.