ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಆರೋಪಿಗಳಿಗೆ ಹೈ ಕೋರ್ಟ್ ಇತ್ತೀಚೆಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೋಗಿತ್ತು. ಇದೀಗ ಜಾಮೀನು ಅರ್ಜಿಯನ್ನ ಸುಪ್ರೀಂ ರದ್ದು ಮಾಡಿದೆ. ಹೀಗಾಗಿ ಆರೋಪಿಗಳಿಗೆ ಮತ್ತೆ ಜೈಲು ಫಿಕ್ಸ್ ಆಗಿದೆ.
ಸುಪ್ರೀಂ ಕೋರ್ಟ್ ನ ಸಿಜಿಐ ನೇತೃತ್ವದ ಪೀಠ, ಹೈಕೋರ್ಟ್ ನೀಡಿದ್ದ ಜಾಮೀನು ಅರ್ಜಿಯನ್ನ ರದ್ದು ಮಾಡಿದೆ. ಸಿಎಎ ಪ್ರತಿಭಟನೆಯಲ್ಲಿ ಹಿಂಸಾಚಾರ, ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿದ್ರು. ಇದಕ್ಕೆ ಕಾರಣ ಎನ್ನಲಾದ 22 ಜನ ಆರೋಪಿಗಳನ್ನ ಅರೆಸ್ಟ್ ಮಾಡಲಾಗಿತ್ತು. ಆದ್ರೆ, ಪೊಲೀಸ್ರ ಕ್ರಮ ಸರಿಯಲ್ಲವೆಂದು ಹೈಕೋರ್ಟ್ ಜಾಮೀನು ಜಾರಿ ಮಾಡಿತ್ತು.