ತಾಳಿಕೋಟೆ ಬಸ್ ನಿಲ್ದಾಣದಲ್ಲಿ ಕಳ್ಳನ ಕೈ ಚಳಕ

569

ಪ್ರಜಾಸ್ತ್ರ ಅಪರಾಧ ಸುದ್ದಿ

ತಾಳಿಕೋಟೆ: ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯಿತ್ತಾ ಕುಳಿತಿದ್ದ ಮಹಿಳೆ ಮಾಂಗಲ್ಯ ಸರ ಕಳ್ಳತನ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಹಿಳೆ ಪಕ್ಕದಲ್ಲಿಯೇ ಹೊಂಚು ಹಾಕಿ ನಿಂತು ನಂತರ ಮಾಂಗಲ್ಯಸರ ಕಿತ್ತುಕೊಂಡ ಕದೀಮ ಓಡಿ ಹೋಗಿದ್ದಾನೆ. ಇನ್ನು
ಕಳ್ಳನ ಕೃತ್ಯ ಬಸ್ ನಿಲ್ದಾಣದಲ್ಲಿನ ಸಿಸಿ ಕೆಮೆರಾದಲ್ಲಿ ಸೆರೆಯಾಗಿದೆ. ರೇಣುಕಾ ಪಾಟೀಲ್ ಎಂಬುವವರ 38 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿದೆ.

ತಾಳಿಕೋಟೆಯಿಂದ ಯಾದಗಿರಿಯ ದೋರಹಳ್ಳಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಘಟನೆ. ಈ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!