ಪ್ರಜಾಸ್ತ್ರ ಸುದ್ದಿ
ಇಂಪಾಲ್: ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಸಂಘರ್ಷ ನಡೆಯುತ್ತಲೇ ಇದೆ. ಆದರೂ ಇದನ್ನು ಶಮನಗೊಳಿಸುವ ಕೆಲಸ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಆಗುತ್ತಿಲ್ಲ. ಇದೀಗ ಮತ್ತೆ ಸಂಘರ್ಷ ಶುರುವಾಗಿದ್ದು, ಗೋದಾಮಿಗೆ ಗಲಭೆಕೋರರು ಬೆಂಕಿ ಹಚ್ಚಿದ್ದಾರೆ.
ಇಂಪಾಲ್ ಅರಮನೆ ಮೈದಾನದಲ್ಲಿ ಗಲಭೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ದಳ ಸ್ಥಳಕ್ಕೆ ಹೋಗಿದ್ದು, ಬೆಂಕಿ ನಂದಿಸುವ ಕೆಲಸ ಮಾಡುತ್ತಿದೆ. ಈ ಗೋದಾಮು ನಿವೃತ್ತ ಐಎಎಸ್ ಅಧಿಕಾರಿಗೆ ಸೇರಿದ್ದು ಎನ್ನಲಾಗುತ್ತಿದೆ.