ಮಣಿಪುರ ಘಟನೆ: ಕಪ್ಪು ಬಟ್ಟೆ ಧರಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ

177

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮಣಿಪುರದಲ್ಲಿ ನಡೆದ ಹಿಂಸಾಚಾರ, ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ, ಬೆತ್ತಲೆ ಮೆರವಣಿಗೆ ಖಂಡಿಸಿ, ವಿಪಕ್ಷಗಳು ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದವು. ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಲಾಯಿತು.

ಮುಂಗಾರು ಅಧಿವೇಶನ ಶುರುವಾಗಿದೆ. ಪ್ರಧಾನಿಯವರು ಸಂಸತ್ತಿನಲ್ಲಿ ಮಾತನಾಡುವುದು ಬಿಟ್ಟು, ಹೊರಗಡೆ ಮಾತನಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತರುತ್ತಿದ್ದಾರೆ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಪಾಲಿಗೆ ಮಣಿಪುರ ಘಟನೆ ಕರಾಳ ಅಧ್ಯಾಯ. ಸಂಸತ್ತು ಪ್ರಜಾಪ್ರಭುತ್ವದ ದೇವಾಲಯ ಪ್ರಧಾನಿ ಇಲ್ಲಿ ಉತ್ತರ ನೀಡಲೇಬೇಕು ಎಂದರು.

ಇನ್ನು ಪ್ರತಿಪಕ್ಷದ ನಾಯಕರು, ಸಂಸದರು ಕಪ್ಪು ಬಟ್ಟೆ ಧರಿಸಿಕೊಂಡು ಬರುವ ಮೂಲಕ ತಮ್ಮ ವಿರೋಧ ವ್ಯಕ್ತಪಡಿಸಿದರು. ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸಿ ಪ್ರತಿಭಟಿಸಲಾಯಿತು. ಹೀಗಾಗಿ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿಲಾಗಿದೆ.




Leave a Reply

Your email address will not be published. Required fields are marked *

error: Content is protected !!