ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಂಡ್ಯದ ಮುನ್ಮುಲ್ ಹಾಲಿನ ಉತ್ಪಾದನಾ ಕೇಂದ್ರದಲ್ಲಿ ಹಾಲಿಗೆ ನೀರು ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರನ್ನ ಅಮಾನತುಗೊಳಿಸಿರುವ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಪ್ರಕರಣ ಬೆಳಕಿಗೆ ಬಂದ ಒಂದು ತಿಂಗಳ ಬಳಿಕ ಕೊನೆಗೂ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರದ ಉಪ ಕಾರ್ಯದರ್ಶಿ ನಾಗರತ್ನಮ್ಮ ಅವರು ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ಕೆಲ ರಾಜಕಾರಣಿಗಳ ವಿರುದ್ಧವೂ ಆರೋಪ ಕೇಳಿ ಬಂದಿದೆ.