ಚಂಡೀಗಢ: ಹರಿಯಾಣದ ಮುಖ್ಯಮಂತ್ರಿಯಾಗಿ ಮನೋಹರ ಲಾಲ್ ಖಟ್ಟರ್ ಪ್ರಮಾಣ ವಚನ ಸ್ವೀಕರಿಸಿದ್ರು. ಉಪ ಮುಖ್ಯಮಂತ್ರಿಯಾಗಿ ಜನ ನಾಯಕ್ ಜನತಾ ಪಕ್ಷದ ದುಷ್ಯಂತ ಚೌಟಾಲಾ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಸತ್ಯದೇವ ನಾರಾಯಣ ಪ್ರಮಾಣ ವಚನ ಬೋಧಿಸಿದ್ರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಜೆ.ಪಿ ನಡ್ಡಾ, ಶಿರೋಮಣಿ ಅಕಾಲಿ ದಳದ ಮುಖಂಡ ಪ್ರಕಾಶ ಸಿಂಗ್ ಬಾದಲ್ ಸೇರಿದಂತೆ ಅನೇಕರು ಭಾಗವಹಿಸಿದ್ರು.
2019ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಸರ್ಕಾರ ರಚನೆಗೆ 6 ಸ್ಥಾನಗಳ ಅವಶ್ಯಕತೆಯಿತ್ತು. ಬಿಜೆಪಿಗೆ ಜೆಜೆಪಿ ಹಾಗೂ ಪಕ್ಷೇತರ ಶಾಸಕರು ಸಾಥ್ ನೀಡಿದ್ರು. ಇವರ ಜೊತೆಗೂಡಿ ಬಿಜೆಪಿ ಸರ್ಕಾರ ರಚನೆ ಮಾಡಿತು. ಈ ಮೂಲಕ ಮನೋಹರ ಲಾಲ್ ಖಟ್ಟರ್ 2ನೇ ಬಾರಿಗೆ ಸಿಎಂ ಆದ್ರು. ಕಾಂಗ್ರೆಸ್ ಗೆ ಮತ್ತೆ ನಿರಾಸೆ ಆಯ್ತು.