ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಮುತ್ತಯ್ಯನಹಟ್ಟಿಯಲ್ಲಿ ಮಾರಮ್ಮನ ಜಾತ್ರೆಯಲ್ಲಿ ಕುರಿ ಕಡಿಯುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಮಾರಮ್ಮನ ದೇವಸ್ಥಾನ ಹಾಗು ಸೇವಾಲಾಲ್ ದೇವಸ್ಥಾನ ಎರಡೂ ಅಕ್ಕಪಕ್ಕದಲ್ಲಿಯೇ ಇವೆ. ಮಾರಮ್ಮ ಹಬ್ಬದ ಹಿನ್ನೆಲೆಯಲ್ಲಿ ಕುರಿ ಕಡಿಯುವ ವಿಚಾರದಲ್ಲಿ ಶುರುವಾದ ಜಗಳ ವಿಕೋಪಕ್ಕೆ ಹೋಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.