ಪ್ರಜಾಸ್ತ್ರ ಸುದ್ದಿ
ಮುಂಬೈ: ಮರಾಠ ಮೀಸಲಾತಿ ಹೋರಾಟ ಸಂಬಂಧ ಮಹಾರಾಷ್ಟ್ರದಲ್ಲಿ ನಿರಂತರ ಹೋರಾಟ ನಡೆಸಲಾಗುತ್ತಿದೆ. ಪ್ರತಿ ಬಾರಿ ಪ್ರತಿಭಟನೆ ನಡೆದಾಗಲೂ ಅದು ಹಿಂಸಾರೂಪ ಪಡೆದುಕೊಳ್ಳುತ್ತಿದೆ. ಬೀಡ್ ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ.
ಈ ಘಟನೆ ಸಂಬಂಧ 49 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಮುಂಜಾಗ್ರತ ಕ್ರಮವಾಗಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ವಿವಿಧ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಬೀಡ್ ಜಿಲ್ಲಾಧಿಕಾರಿ ದೀಪಾ ಮುಧೋಳ ಮುಂಡೆ ಅವರ ಆದೇಶದಂತೆ ರಾಷ್ಟ್ರೀಯ, ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಜಿಲ್ಲಾ, ತಾಲೂಕು ಕಚೇರಿಯಿಂದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.