ಪ್ರಜಾಸ್ತ್ರ ಸುದ್ದಿ
ಮುಂಬೈ: ಮರಾಠ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ಸಂಪೂರ್ಣವಾಗಿ ಹಿಂಸಾ ಸ್ವರೂಪ ಪಡೆದುಕೊಂಡಿದೆ. ಇದರಿಂದಾಗಿ ಅಪಾರ ಪ್ರಮಾಣ ಆಸ್ತಿ ಪಾಸ್ತಿ ಹಾನಿಯಾಗಿದೆ. 90ಕ್ಕೂ ಜನರು ಗಾಯ ಗೊಂಡಿದ್ದಾರೆ. ಇದುವರೆಗೂ 350ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಜಲ್ನಾ ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟ ಹಿಂಸೆಗೆ ತಿರುಗಿದೆ. ಹೀಗಾಗಿ ಪ್ರತಿಭಟನಾಕಾರರು, ಪೊಲೀಸರ ನಡುವೆ ಫೈಟ್ ನಡೆದಿದೆ. ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೋಜ್ ಜಾರಂಗ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿತ್ತು. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಹಿಂಸಾಚಾರದ ತಿರುವು ಪಡೆದುಕೊಂಡಿದೆ.